24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.


ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು ದೇಶದ ಆಧಾರಸ್ತಂಭಗಳ ಬಗ್ಗೆ ಬಜೆಟ್ ಸಂಪೂರ್ಣ ಕೇಂದ್ರೀಕರಿಸಿದ್ದು, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಧ್ಯೇಯದಡಿ 2047 ರವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಸಂಕಲ್ಪವನ್ನು ಬಜೆಟ್ ಪುನರುಚ್ಚರಿಸಿದೆ.
ಮುಂದಿನ ಪೀಳಿಗೆಯನ್ನು ಗುರಿಯನ್ನಾಗಿರಿಸಿಕೊಂಡು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಸಿತ ಭಾರತವಾಗಲಿದೆ.


ರೈತರ ಆದಾಯ ಹೆಚ್ಚಿಸಲು ಅವರಿಗೆ ಅಗತ್ಯವಾದ ನೆರವು ನೀಡುವ, ಒಂದು ಕೋಟಿ ಮನೆಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ, ಆಯುಷ್ಮಾನ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸುವ ಯೋಜನೆಯು ಸ್ವಾಗತಾರ್ಹವಾಗಿದೆ. ಒಟ್ಟಿನಲ್ಲಿ ದೇಶದ ಸರ್ವರೀತಿಯ ಉನ್ನತಿಗೆ ಬಜೆಟ್ ಪೂರಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya
error: Content is protected !!