
ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಫೆ.2 ರಂದು ನಡೆಯಿತು.

ಹಸಿರು ಕಾಣಿಕೆ ಮೆರವಣಿಗೆಯು ನೃತ್ಯ ಭಜನೆ ಮೂಲಕ ದೇವಳಕ್ಕೆ ಸಾಗಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.














