May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಇದೀಗ ಸರಕಾರದಿಂದ ಪೊಲೀಸು ನಿರೀಕ್ಷಕರ ಹುದ್ದೆಗೆ ಈ ಹಿಂದೆ 2011ನೇ ಸಾಲಿನಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಸದ್ರಿ ಬೆಂಗಳೂರು ಸಿ.ಐ.ಡಿ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಬಸವಲಿಂಗಯ್ಯ ಸುಬ್ಬಾಪುರಮಠರವರು ಬೆಳ್ತಂಗಡಿ ಪೊಲೀಸು ನಿರೀಕ್ಷಕರಾಗಿ ನಿಯುಕ್ತಿಗೊಂಡರು. ಇವರು ಪಶ್ಚಿಮ ವಲಯ ಐಜಿಪಿ ಮತ್ತು ಮಂಗಳೂರು ಪೋಲಿಸ್ ಅಧೀಕ್ಷಕರನ್ನು ಬೇಟಿಯಾಗಿ ನಾಗೇಶ್ ಕದ್ರಿಯವರಿಂದ ಬೆಳ್ತಂಗಡಿ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡರು.


ಈ ಹಿಂದೆ ಬೆಳ್ತಂಗಡಿಯಲ್ಲಿ ದಕ್ಷ ಮತ್ತು ಜನಸ್ನೇಹಿ ಅಧಿಕಾರಿಯಾಗಿ ಹೆಸರು ಗಳಿಸಿದ್ದ ನೇರ ನಡೆಯ ಇವರ ನೇಮಕದಿಂದ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಲಿಕ್ಕಿಲ್ಲ ಎಂಬ ಆಶಾಭಾವನೆ ನಾಗರಿಕರದ್ದಾಗಿದೆ.

Related posts

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya
error: Content is protected !!