25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಇದೀಗ ಸರಕಾರದಿಂದ ಪೊಲೀಸು ನಿರೀಕ್ಷಕರ ಹುದ್ದೆಗೆ ಈ ಹಿಂದೆ 2011ನೇ ಸಾಲಿನಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಸದ್ರಿ ಬೆಂಗಳೂರು ಸಿ.ಐ.ಡಿ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಬಸವಲಿಂಗಯ್ಯ ಸುಬ್ಬಾಪುರಮಠರವರು ಬೆಳ್ತಂಗಡಿ ಪೊಲೀಸು ನಿರೀಕ್ಷಕರಾಗಿ ನಿಯುಕ್ತಿಗೊಂಡರು. ಇವರು ಪಶ್ಚಿಮ ವಲಯ ಐಜಿಪಿ ಮತ್ತು ಮಂಗಳೂರು ಪೋಲಿಸ್ ಅಧೀಕ್ಷಕರನ್ನು ಬೇಟಿಯಾಗಿ ನಾಗೇಶ್ ಕದ್ರಿಯವರಿಂದ ಬೆಳ್ತಂಗಡಿ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡರು.


ಈ ಹಿಂದೆ ಬೆಳ್ತಂಗಡಿಯಲ್ಲಿ ದಕ್ಷ ಮತ್ತು ಜನಸ್ನೇಹಿ ಅಧಿಕಾರಿಯಾಗಿ ಹೆಸರು ಗಳಿಸಿದ್ದ ನೇರ ನಡೆಯ ಇವರ ನೇಮಕದಿಂದ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಲಿಕ್ಕಿಲ್ಲ ಎಂಬ ಆಶಾಭಾವನೆ ನಾಗರಿಕರದ್ದಾಗಿದೆ.

Related posts

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!