24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ನಡೆದಿದೆ.


ರಸ್ತೆ ಮೂಲಕ ಕಾರ್ಯಕ್ರಮ ಒಂದಕ್ಕೆ ತೆರಳುತ್ತಿದ್ದ ಬೈಕ್ ಸವಾರರು ಬೆಂಕಿ ವ್ಯಾಪಿಸುವುದು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದರು.


ತಕ್ಷಣ ಸ್ಥಳಕ್ಕಾಗಮಿಸಿದ ಪ್ರಭಾಕರ ಪಟವರ್ಧನ್, ಗುರುಪ್ರಸಾದ್ ಗೋಖಲೆ,ಸುನಿಲ್ ಹಾಗೂ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಇನ್ನಷ್ಟು ವ್ಯಾಪಿಸಿದಂತೆ ಕ್ರಮ ಕೈಗೊಂಡರು.
ಒಂದು ವೇಳೆ ಬೆಂಕಿ ಇನ್ನಷ್ಟು ಪಸರಿಸುತ್ತಿದ್ದರೆ ರಬ್ಬರ್ ತೋಟ ಸಹಿತ ಇತರ ಕೃಷಿ ಬೆಂಕಿಗೆ ಆಹುತಿಯಾಗುವ ಸಾಧ್ಯತೆ ಇತ್ತು.

Related posts

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!