ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ನಡೆದಿದೆ.

ರಸ್ತೆ ಮೂಲಕ ಕಾರ್ಯಕ್ರಮ ಒಂದಕ್ಕೆ ತೆರಳುತ್ತಿದ್ದ ಬೈಕ್ ಸವಾರರು ಬೆಂಕಿ ವ್ಯಾಪಿಸುವುದು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದರು.
ತಕ್ಷಣ ಸ್ಥಳಕ್ಕಾಗಮಿಸಿದ ಪ್ರಭಾಕರ ಪಟವರ್ಧನ್, ಗುರುಪ್ರಸಾದ್ ಗೋಖಲೆ,ಸುನಿಲ್ ಹಾಗೂ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಇನ್ನಷ್ಟು ವ್ಯಾಪಿಸಿದಂತೆ ಕ್ರಮ ಕೈಗೊಂಡರು.
ಒಂದು ವೇಳೆ ಬೆಂಕಿ ಇನ್ನಷ್ಟು ಪಸರಿಸುತ್ತಿದ್ದರೆ ರಬ್ಬರ್ ತೋಟ ಸಹಿತ ಇತರ ಕೃಷಿ ಬೆಂಕಿಗೆ ಆಹುತಿಯಾಗುವ ಸಾಧ್ಯತೆ ಇತ್ತು.













