24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ ಮಹಾ ಸಮ್ಮೇಳನ “ಪರ್ವ”-2024 ವಿಶೇಷ ಕಾರ್ಯಕ್ರಮ ನಡೆಯಲಿದೆಯೆಂದು ಸನ್ಯಾಸಿ ಗಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಅಧ್ಯಕ್ಷ ಸಂಪತ್ ಬಿ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರ ಆಶೀರ್ವಾದೊಂದಿಗೆ ದೈವದ ಅನುಗ್ರಹವಿರುವಂತಹ ಅತ್ಯಂತ ಶ್ರೇಷ್ಠವಾದ ಅಪರೂಪದ ಪರಂಪರೆ ನಮ್ಮ ಕರಾವಳಿಯ ತುಳುವರದು. ತುಳುನಾಡಿನ ದೈವರಾಧನೆಯ ಕುರಿತು ಅಧ್ಯಯನ ಮಾಡಿ ಮುಂದಿನ ತಲೆಮಾರಿಗೆ ತಿಳಿಸುವಂತ ವಿಶೇಷವಾದ ಪ್ರಯತ್ನ ಮಾಡುತ್ತಿದ್ದೇವೆ.

ತುಳುನಾಡಿನಲ್ಲಿ ಸುಮಾರು 1001 ದೈವಗಳಿವೆ. ಹಲವಾರು ಧಾರ್ಮಿಕ ಪಂಡಿತರು, ಪ್ರಸಿದ್ದ ವಿದ್ವಾಂಸರು, ಸಾಹಿತಿಗಳು ಅಧ್ಯಯನ ಮಾಡಿದ್ದಾರೆ.
ದೈವಗಳ ಪರಂಪಾರೀಕ ಹಿನ್ನಲೆ, ಕಾರಣಿಕ, ಮಹತ್ವ, ವಿಚಾರ ಮುಂದಿನ ಜನಾಂಗಕ್ಕೆ ಗೊತ್ತಾಗಬೇಕಾದರೆ ಅದನ್ನು ಯುವ ಮನಸ್ಸುಗಳಿಗೆ ತಿಳಿಸುವ ಪ್ರಯತ್ನವಾಗಬೇಕು.

ದೈವ ನರ್ತಕರ ಸಮಾವೇಶ, ದೈವದ ಪರಿಚಾರಕರ ಸಮಾವೇಶ, ದೈವಸ್ಥಾನದ ಆಡಳಿತ ಮುಖ್ಯಸ್ಥರ ಸಮಾವೇಶ ನಡೆಸಿ ಅವರ ವಿಚಾರಧಾರೆಯನ್ನು ಪಡೆದು ಸರಕಾರಕ್ಕೆ ನಿರ್ಣಯ ಒಪ್ಪಿಸುವಂತ ವಿನೂತನ ಪ್ರಯತ್ನ ಮಾಡಲಿದ್ದೇವೆ.
ತುಳುನಾಡಿನ ದೈವಾರಾಧನೆಯ ಸಮಗ್ರ ಅಧ್ಯಯನ ಮತ್ತು ದೈವಾರಾಧನೆಯಲ್ಲಿ ತೊಡಗಿಸಿಕೊಂಡವರಿಗೆ ಗೌರವಾರ್ಪಣೆ ಮಾಡುವ ನಿಟ್ಟಿನಲ್ಲಿ ವಿಚಾರಗೋಷ್ಠಿಗಳು, ಸಂವಾದ ಕಾರ್ಯಕ್ರಮ, ದೈವ ನರ್ತಕರಿಗೆ, ದೈವ ಪರಿಚಾರಕರಿಗೆ, ದೈವಸ್ಥಾನ ಮುಖ್ಯಸ್ಥರಿಗೆ ಗೌರವಾರ್ಪಣೆ ಮಾಡುವ ಆಶಯ ನಮ್ಮದಾಗಿದೆ.

ತುಳುನಾಡಿನ ದೈವರಾಧನೆಯನ್ನು ಜೀವನೋಪಾಯಕ್ಕಾಗಿ ಮಾಡಿದ ಅದೆಷ್ಟೋ ಕುಟುಂಬಗಳಿವೆ. ಅವರ ಬದುಕ ಅಗಿದೆ. ಅವರಿಗೆ ಮಾಸಶಾನ ಸಿಗುವಂತಬೇಕು.

ದೈವರಾಧನೆ ಬಗೆಗೆ ಶಾಲೆಯ ಪಠ್ಯ ಪುಸ್ತಕಕ್ಕೆ ಸೇರ್ಪಡಿಸಿದರೆ ತುಳುನಾಡಿನ ಇತಿಹಾಸ, ಪರಂಪರೆ, ಜನಪದ ಹಿನ್ನಲೆ ಮುಂದಿನ ಜನಾಂಗಕ್ಕೆ ತಿಳಿಯುತ್ತದೆ. ಈ ಕಾರ್ಯಕ್ರಮಕ್ಕೆ ‘ಪರ್ವ’ ಎಂಬ ಹೆಸರಿಟ್ಟಿದ್ದೇವೆ.
ಸನ್ಯಾಸಿ ಗುಳಿಗ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಫೆ. 27 ರಿಂದ ಮಾ 2 ವರೆಗೆ ನಡೆಯಲಿದೆಯೆಂದು ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!