May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ ಮಹಾ ಸಮ್ಮೇಳನ “ಪರ್ವ”-2024 ವಿಶೇಷ ಕಾರ್ಯಕ್ರಮ ನಡೆಯಲಿದೆಯೆಂದು ಸನ್ಯಾಸಿ ಗಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಅಧ್ಯಕ್ಷ ಸಂಪತ್ ಬಿ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರ ಆಶೀರ್ವಾದೊಂದಿಗೆ ದೈವದ ಅನುಗ್ರಹವಿರುವಂತಹ ಅತ್ಯಂತ ಶ್ರೇಷ್ಠವಾದ ಅಪರೂಪದ ಪರಂಪರೆ ನಮ್ಮ ಕರಾವಳಿಯ ತುಳುವರದು. ತುಳುನಾಡಿನ ದೈವರಾಧನೆಯ ಕುರಿತು ಅಧ್ಯಯನ ಮಾಡಿ ಮುಂದಿನ ತಲೆಮಾರಿಗೆ ತಿಳಿಸುವಂತ ವಿಶೇಷವಾದ ಪ್ರಯತ್ನ ಮಾಡುತ್ತಿದ್ದೇವೆ.

ತುಳುನಾಡಿನಲ್ಲಿ ಸುಮಾರು 1001 ದೈವಗಳಿವೆ. ಹಲವಾರು ಧಾರ್ಮಿಕ ಪಂಡಿತರು, ಪ್ರಸಿದ್ದ ವಿದ್ವಾಂಸರು, ಸಾಹಿತಿಗಳು ಅಧ್ಯಯನ ಮಾಡಿದ್ದಾರೆ.
ದೈವಗಳ ಪರಂಪಾರೀಕ ಹಿನ್ನಲೆ, ಕಾರಣಿಕ, ಮಹತ್ವ, ವಿಚಾರ ಮುಂದಿನ ಜನಾಂಗಕ್ಕೆ ಗೊತ್ತಾಗಬೇಕಾದರೆ ಅದನ್ನು ಯುವ ಮನಸ್ಸುಗಳಿಗೆ ತಿಳಿಸುವ ಪ್ರಯತ್ನವಾಗಬೇಕು.

ದೈವ ನರ್ತಕರ ಸಮಾವೇಶ, ದೈವದ ಪರಿಚಾರಕರ ಸಮಾವೇಶ, ದೈವಸ್ಥಾನದ ಆಡಳಿತ ಮುಖ್ಯಸ್ಥರ ಸಮಾವೇಶ ನಡೆಸಿ ಅವರ ವಿಚಾರಧಾರೆಯನ್ನು ಪಡೆದು ಸರಕಾರಕ್ಕೆ ನಿರ್ಣಯ ಒಪ್ಪಿಸುವಂತ ವಿನೂತನ ಪ್ರಯತ್ನ ಮಾಡಲಿದ್ದೇವೆ.
ತುಳುನಾಡಿನ ದೈವಾರಾಧನೆಯ ಸಮಗ್ರ ಅಧ್ಯಯನ ಮತ್ತು ದೈವಾರಾಧನೆಯಲ್ಲಿ ತೊಡಗಿಸಿಕೊಂಡವರಿಗೆ ಗೌರವಾರ್ಪಣೆ ಮಾಡುವ ನಿಟ್ಟಿನಲ್ಲಿ ವಿಚಾರಗೋಷ್ಠಿಗಳು, ಸಂವಾದ ಕಾರ್ಯಕ್ರಮ, ದೈವ ನರ್ತಕರಿಗೆ, ದೈವ ಪರಿಚಾರಕರಿಗೆ, ದೈವಸ್ಥಾನ ಮುಖ್ಯಸ್ಥರಿಗೆ ಗೌರವಾರ್ಪಣೆ ಮಾಡುವ ಆಶಯ ನಮ್ಮದಾಗಿದೆ.

ತುಳುನಾಡಿನ ದೈವರಾಧನೆಯನ್ನು ಜೀವನೋಪಾಯಕ್ಕಾಗಿ ಮಾಡಿದ ಅದೆಷ್ಟೋ ಕುಟುಂಬಗಳಿವೆ. ಅವರ ಬದುಕ ಅಗಿದೆ. ಅವರಿಗೆ ಮಾಸಶಾನ ಸಿಗುವಂತಬೇಕು.

ದೈವರಾಧನೆ ಬಗೆಗೆ ಶಾಲೆಯ ಪಠ್ಯ ಪುಸ್ತಕಕ್ಕೆ ಸೇರ್ಪಡಿಸಿದರೆ ತುಳುನಾಡಿನ ಇತಿಹಾಸ, ಪರಂಪರೆ, ಜನಪದ ಹಿನ್ನಲೆ ಮುಂದಿನ ಜನಾಂಗಕ್ಕೆ ತಿಳಿಯುತ್ತದೆ. ಈ ಕಾರ್ಯಕ್ರಮಕ್ಕೆ ‘ಪರ್ವ’ ಎಂಬ ಹೆಸರಿಟ್ಟಿದ್ದೇವೆ.
ಸನ್ಯಾಸಿ ಗುಳಿಗ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಫೆ. 27 ರಿಂದ ಮಾ 2 ವರೆಗೆ ನಡೆಯಲಿದೆಯೆಂದು ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!