ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ,ಕೆ.ಪಿ ಸಿ ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ಮೂಲ ಸೌಕರ್ಯಗಳಾದ ಸಿಬ್ಬಂದಿ ವಸತಿ ಗೃಹ ನಿರ್ಮಾಣ, ಶವ ಪರೀಕ್ಷಾ ಕೊಠಡಿ ಮತ್ತು ಶವ ಶೀಥಲೀಕರಣ ಕೇಂದ್ರ ನಿರ್ಮಾಣ , Sweage ಟ್ರೀಟ್ ಮೆಂಟ್ ಪ್ಲ್ಯಾಂಟ್ ನಿರ್ಮಾಣ ,ಆಸ್ಪತ್ರೆಯ ಹಿಂದೆ ಮತ್ತು ಮುಂದುಗಡೆ ಕಂಪೌಂಡ್ ದುರಸ್ಥಿ ಕಾಮಗಾರಿಗಳ ಬೇಡಿಕೆಯ ಮನವಿಯನ್ನು ಹಾಗೂ ತಾಲ್ಲೂಕಿನ ಅಭಿವೃದ್ದಿಯ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ.ಎ. ಹಿದಾಯತ್ತುಲ್ಲ ಹಾಜರಿದ್ದರು.













