ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ ಎ.ಎಂ. ರವರು, ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ಘಟನೆ ಫೆ.1ರಂದು ನಡೆದಿದೆ.
ಆ ವೇಳೆ ಕೃತ್ಯದಲ್ಲಿ ಭಾಗವಹಿಸುತ್ತಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ ಬಾಳು ನ್ನು ಕಟ್ಟಲಾಗಿದ್ದ ಎರಡು ಕೋಳಿಗಳನ್ನು ಮುಂದಿನ ಕಾನೂನುಕ್ರಮಕ್ಕಾಗಿ ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 11/2024 ಕಲ;87 ಕೆ ಪಿ ಆಕ್ಟ್ 11(1)(n) OF CRUELTY TO ANIMALS ACT, 1960 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.













