24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya
error: Content is protected !!