26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.


ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು ದೇಶದ ಆಧಾರಸ್ತಂಭಗಳ ಬಗ್ಗೆ ಬಜೆಟ್ ಸಂಪೂರ್ಣ ಕೇಂದ್ರೀಕರಿಸಿದ್ದು, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಧ್ಯೇಯದಡಿ 2047 ರವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಸಂಕಲ್ಪವನ್ನು ಬಜೆಟ್ ಪುನರುಚ್ಚರಿಸಿದೆ.
ಮುಂದಿನ ಪೀಳಿಗೆಯನ್ನು ಗುರಿಯನ್ನಾಗಿರಿಸಿಕೊಂಡು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಸಿತ ಭಾರತವಾಗಲಿದೆ.


ರೈತರ ಆದಾಯ ಹೆಚ್ಚಿಸಲು ಅವರಿಗೆ ಅಗತ್ಯವಾದ ನೆರವು ನೀಡುವ, ಒಂದು ಕೋಟಿ ಮನೆಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ, ಆಯುಷ್ಮಾನ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸುವ ಯೋಜನೆಯು ಸ್ವಾಗತಾರ್ಹವಾಗಿದೆ. ಒಟ್ಟಿನಲ್ಲಿ ದೇಶದ ಸರ್ವರೀತಿಯ ಉನ್ನತಿಗೆ ಬಜೆಟ್ ಪೂರಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya
error: Content is protected !!