27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಧರ್ಮಸ್ಥಳ: ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು.
ಅವರು ಫೆ. 2 ರಂದು ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು.

ಶ್ರದ್ಧಾ-ಭಕ್ತಿಯಿಂದ ದೇವರಪೂಜೆ, ಅಭಿಷೇಕ ಮಾಡುವುದರಿಂದ ಎಲ್ಲಾ ಸಂಕಟಗಳ ನಿವಾರಣೆಯಾಗಿ ಜೀವನ ಪಾವನವಾಗುತ್ತದೆ. ಆತ್ಮಕಲ್ಯಾಣವಾಗುತ್ತದೆ. ಸುಖ-ಶಾಂತಿ ಸಿಗುತ್ತದೆ ಎಂದು ಹೇಳಿದರು.


ಪೂಜ್ಯ ಆದಿಸಾಗರ ಮುನಿಮಹಾರಾಜರು ಪ್ರವಚನ ನೀಡಿ ನಾವು ಬೀಜ ಬಿತ್ತಿದಂತೆ ಫಲಸಿಗುವ ಹಾಗೆ ಸ್ವಾರ್ಥ ರಹಿತರಾಗಿ ಸತ್ಕಾರ್ಯ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ನಿತ್ಯವೂ ವೃತ-ನಿಯಮಗಳ ಪಾಲನೆಯೊಂದಿಗೆ ದೇವರ ಪೂಜೆ, ಮುನಿಗಳಿಗೆ ಆಹಾರದಾನ ಮಾಡಿದರೆ ಆತ್ಮಕಲ್ಯಾಣವಾಗುತ್ತದೆ ಎಂದು ಹೇಳಿದರು.


ಕಾರ್ಕಳದ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ 216 ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
error: Content is protected !!