27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

 ನಾವೂರು : ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವವು ಜ 31 ಮತ್ತು ಫೆ 1 ರಂದು ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತ್ರತ್ವ ಹಾಗು ಪ್ರಧಾನ ಅರ್ಚಕ ಅಶ್ವಿನ್ ಭಟ್ ಅವರ ಪೌರೋಹಿತ್ಯದಲ್ಲಿ  ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ  ಅತ್ಯಂತ ವಿಜೃಂಭಣೆಯಿಂದ ಸಂಪನ್ನಗೊಂಡಿತು. 

ಇಂದಬೆಟ್ಟು,ನಾವೂರು, ನಡ ಮತ್ತು ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಿಸಲ್ಪಟ್ಟಿತು.  

  ಜ 28 ಮತ್ತು 29ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಪಠಣ ನಡೆಯಿತು. . ಜ 3೦ರಂದು ಬೆಳಿಗ್ಗೆ ಶ್ರೀ ದೇವರಿಗೆ ಭಕ್ತಾದಿಗಳಿಂದ ತುಳಸಿ ನಾಮಾರ್ಚನೆ ನಡೆಯಿತು. ಜ 31ರಂದು  ಬೆಳಿಗ್ಗೆ ಗಣಹೋಮ,ಶ್ರೀ  ದೇವರಿಗೆ ಪಂಚ ವಿಂಶತಿ ಕಲಶ,ಗಣಪತಿ  ದೇವರಿಗೆ ನವಕ ಕಲಶ,ನಾಗ ದೇವರಿಗೆ ಕಲಶ ,ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ,ಪ್ರತಿಷ್ಠ ವರ್ಧಂತ್ಯುತ್ಸವ ನಡೆಯಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವರ ಉತ್ಸವ ಬಲಿ , ಪ್ರಸಾದ ವಿತರಣೆ, ಫೆ. 1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ, ಮದ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.  ಸಂಜೆ ಪರಿಸರದ  ವಿವಿಧ ಭಜನಾ ತಂಡಗಳಿಂದ ಕಮ್ಮಟ ಭಜನೋತ್ಸವ ಅತ್ಯಂತ ಯಶಸ್ವಿಯಾಗಿ  ಸಂಪನ್ನಗೊಂಡಿತು. . ರಾತ್ರಿ ರಂಗಪೂಜೆ , ಧಾರ್ಮಿಕ ಸಭೆ ಹಾಗು ಅನ್ನಸಂತರ್ಪಣೆ ನಡೆಯಿತು.          ದೈವಾರಾಧನೆಯ ಮಹತ್ವವನ್ನೇ ಪ್ರಧಾನ ಸಂದೇಶವಾಗಿಟ್ಟಿರುವ ಕಲಾಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ  “ಶಿವದೂತೆ ಗುಳಿಗೆ” ನಾಟಕ ಪ್ರೇಕ್ಷಕರನ್ನು  ಮೂಕವಿಸ್ಮಿತರನ್ನಾಗಿಸಿತು. 

ಊರ ಪರವೂರ ಭಕ್ತರು ಅನ್ನದಾನ ಸೇವೆ ಮಾಡಿಸಿ , ಬಹಳಷ್ಟು ಭಕ್ತರು ಅನ್ಯಾನ್ಯ ಸೇವೆಗಳ ಮೂಲಕ ಸಹಕರಿಸಿ ಆರ್ಥಿಕವಾಗಿಯೂ ಶಕ್ತಿಯನ್ನು ತುಂಬಿರುತ್ತಾರೆ. ಅನೇಕ ಗಣ್ಯರ ಉಪಸ್ಥಿತಿ,ವಿಶೇಷ ದೀಪಾಲಂಕಾರ, ಗೂಡುದೀಪಗಳು, ಮಕ್ಕಳ ಆಕರ್ಷಣೆಯ ಸಂತೆ ಇತ್ಯಾದಿಗಳು ಜಾತ್ರೆಯ ಸೊಗಡನ್ನು ಹೆಚ್ಚಿಸಿವೆ ..ಊರವರ ಪೂರ್ಣ ಸಹಕಾರದಿಂದ  ವರ್ಧಂತ್ಯುತ್ಸವ  ಹಾಗು ಜಾತ್ರಾ ಮಹೋತ್ಸವ  ಅತ್ಯಂತ ಶ್ರದ್ಧಾಭಕ್ತಿಯಿಂದ  ವೈಭವದಿಂದ ಸುಸಂಪನ್ನಗೊಂಡಿತು. 

Related posts

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya
error: Content is protected !!