ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇದೀಗ ಸರಕಾರದಿಂದ ಪೊಲೀಸು ನಿರೀಕ್ಷಕರ ಹುದ್ದೆಗೆ ಈ ಹಿಂದೆ 2011ನೇ ಸಾಲಿನಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಸದ್ರಿ ಬೆಂಗಳೂರು ಸಿ.ಐ.ಡಿ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಬಸವಲಿಂಗಯ್ಯ ಸುಬ್ಬಾಪುರಮಠರವರು ಬೆಳ್ತಂಗಡಿ ಪೊಲೀಸು ನಿರೀಕ್ಷಕರಾಗಿ ನಿಯುಕ್ತಿಗೊಂಡರು. ಇವರು ಪಶ್ಚಿಮ ವಲಯ ಐಜಿಪಿ ಮತ್ತು ಮಂಗಳೂರು ಪೋಲಿಸ್ ಅಧೀಕ್ಷಕರನ್ನು ಬೇಟಿಯಾಗಿ ನಾಗೇಶ್ ಕದ್ರಿಯವರಿಂದ ಬೆಳ್ತಂಗಡಿ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಬೆಳ್ತಂಗಡಿಯಲ್ಲಿ ದಕ್ಷ ಮತ್ತು ಜನಸ್ನೇಹಿ ಅಧಿಕಾರಿಯಾಗಿ ಹೆಸರು ಗಳಿಸಿದ್ದ ನೇರ ನಡೆಯ ಇವರ ನೇಮಕದಿಂದ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಲಿಕ್ಕಿಲ್ಲ ಎಂಬ ಆಶಾಭಾವನೆ ನಾಗರಿಕರದ್ದಾಗಿದೆ.













