25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಇದೀಗ ಸರಕಾರದಿಂದ ಪೊಲೀಸು ನಿರೀಕ್ಷಕರ ಹುದ್ದೆಗೆ ಈ ಹಿಂದೆ 2011ನೇ ಸಾಲಿನಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಸದ್ರಿ ಬೆಂಗಳೂರು ಸಿ.ಐ.ಡಿ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಬಸವಲಿಂಗಯ್ಯ ಸುಬ್ಬಾಪುರಮಠರವರು ಬೆಳ್ತಂಗಡಿ ಪೊಲೀಸು ನಿರೀಕ್ಷಕರಾಗಿ ನಿಯುಕ್ತಿಗೊಂಡರು. ಇವರು ಪಶ್ಚಿಮ ವಲಯ ಐಜಿಪಿ ಮತ್ತು ಮಂಗಳೂರು ಪೋಲಿಸ್ ಅಧೀಕ್ಷಕರನ್ನು ಬೇಟಿಯಾಗಿ ನಾಗೇಶ್ ಕದ್ರಿಯವರಿಂದ ಬೆಳ್ತಂಗಡಿ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡರು.


ಈ ಹಿಂದೆ ಬೆಳ್ತಂಗಡಿಯಲ್ಲಿ ದಕ್ಷ ಮತ್ತು ಜನಸ್ನೇಹಿ ಅಧಿಕಾರಿಯಾಗಿ ಹೆಸರು ಗಳಿಸಿದ್ದ ನೇರ ನಡೆಯ ಇವರ ನೇಮಕದಿಂದ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಲಿಕ್ಕಿಲ್ಲ ಎಂಬ ಆಶಾಭಾವನೆ ನಾಗರಿಕರದ್ದಾಗಿದೆ.

Related posts

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!