23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya
error: Content is protected !!