23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
error: Content is protected !!