April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು.

ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಕಟ್ಟಡದ ಮಾಲಕರಾದ ನಿತ್ಯಾನಂದ ಪೂಜಾರಿ ಮತ್ತು ಸಂಸ್ಥೆಯ ಮಾಲಕ ಪ್ರಕಾಶ್ ಆಚಾರ್ಯರ ಮಾತೃಶ್ರೀಯವರಾದ ಚಂದ್ರಾವತಿ ಇವರುಗಳು ದೀಪವನ್ನು ಬೆಳಗಿಸಿ ನೂತನ ಟೈಲರಿಂಗ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಮತ್ತು ಬಂಧು ಬಳಗದವರು ಹಾಗೂ ಊರ-ಪರ ಊರ ಗಣ್ಯರು ಉಪಸ್ಥಿತರಿದ್ದರು. ಪ್ರಕಾಶ್ ಆಚಾರ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಗಣ್ಯರನ್ನು ಸ್ವಾಗತಿಸಿ ಧನ್ಯವಾದಗೈದರು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ತಂತ್ರಿಯವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಗ್ರಾಹಕ ಬಂಧುಗಳು ನೂತನ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಪಯೋಗವಾಗುವ ಡಿಸೈನಿಂಗ್ ಬ್ಲೌಸ್, ಚೂಡಿದಾರ್, ಲೆಹಂಗಾ, ಫಾಲ್, ಗೊಂಡೆ, ಜಿಗ್ ಜಾಗ್ ಮುಂತಾದವುಗಳ ಹೊಲಿಗೆಯ ಅತ್ತ್ಯುತ್ತಮ ಸೇವೆಯ ಸದುಪಯೋಗವನ್ನು ಪಡೆದುಕೊಂಡು ಸಂಸ್ಥೆಯ ಏಳಿಗೆಗೆ ತಮ್ಮೊಂದಿಗೆ ಕೈ ಜೋಡಿಸಿ ಸಹಕರಿಸಬೇಕೆಂದು ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya
error: Content is protected !!