22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ ಹಿದಾಯತುಲ್ಲ, ಜಿಲ್ಲಾ ಆರೋಗ್ಯಧಿಕಾರಿ ಡಾl. ಎಚ್ ಆರ್ ತಿಮ್ಮಯ್ಯ ರವರುಗಳಿಗೆ ಸಂತ್ರಸ್ತರ ಪರವಾಗಿ ಮತ್ತು ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿರುವುದಾಗಿ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಘಟಕಕ್ಕೆ ನಾಲ್ಕು ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್ ಓ ಯುನಿಟ್ ಅನ್ನು ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ನ್ಯಾಯವಾದಿ ಬಿ. ಕೆ ಧನಂಜಯ ರಾವ್ ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ರೋಟರಿ ಕ್ಲಬ್ ಇಂದಿರಾನಗರ – ಬೆಂಗಳೂರಿನ ಅಧ್ಯಕ್ಷರಾದ ಬಾಲಕೃಷ್ಣನ್ ಮತ್ತು ಜಗದೀಶ್ ರಾವ್, ಮುಗುಳಿ ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!