25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021 ಹಾಗೂ 22 ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಐವತ್ತು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಬಂದಿದ್ದು, ಒಟ್ಟು ಮೂರು ಲಕ್ಷ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya
error: Content is protected !!