September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021 ಹಾಗೂ 22 ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಐವತ್ತು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಬಂದಿದ್ದು, ಒಟ್ಟು ಮೂರು ಲಕ್ಷ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya
error: Content is protected !!