23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು.

ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಕಟ್ಟಡದ ಮಾಲಕರಾದ ನಿತ್ಯಾನಂದ ಪೂಜಾರಿ ಮತ್ತು ಸಂಸ್ಥೆಯ ಮಾಲಕ ಪ್ರಕಾಶ್ ಆಚಾರ್ಯರ ಮಾತೃಶ್ರೀಯವರಾದ ಚಂದ್ರಾವತಿ ಇವರುಗಳು ದೀಪವನ್ನು ಬೆಳಗಿಸಿ ನೂತನ ಟೈಲರಿಂಗ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಮತ್ತು ಬಂಧು ಬಳಗದವರು ಹಾಗೂ ಊರ-ಪರ ಊರ ಗಣ್ಯರು ಉಪಸ್ಥಿತರಿದ್ದರು. ಪ್ರಕಾಶ್ ಆಚಾರ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಗಣ್ಯರನ್ನು ಸ್ವಾಗತಿಸಿ ಧನ್ಯವಾದಗೈದರು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ತಂತ್ರಿಯವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಗ್ರಾಹಕ ಬಂಧುಗಳು ನೂತನ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಪಯೋಗವಾಗುವ ಡಿಸೈನಿಂಗ್ ಬ್ಲೌಸ್, ಚೂಡಿದಾರ್, ಲೆಹಂಗಾ, ಫಾಲ್, ಗೊಂಡೆ, ಜಿಗ್ ಜಾಗ್ ಮುಂತಾದವುಗಳ ಹೊಲಿಗೆಯ ಅತ್ತ್ಯುತ್ತಮ ಸೇವೆಯ ಸದುಪಯೋಗವನ್ನು ಪಡೆದುಕೊಂಡು ಸಂಸ್ಥೆಯ ಏಳಿಗೆಗೆ ತಮ್ಮೊಂದಿಗೆ ಕೈ ಜೋಡಿಸಿ ಸಹಕರಿಸಬೇಕೆಂದು ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!