23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
error: Content is protected !!