22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!