25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!