July 23, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
error: Content is protected !!