22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!