23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya
error: Content is protected !!