23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!