July 23, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya
error: Content is protected !!