23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣ: ಎಸ್‌ಐಟಿ ನಿಷ್ಪಕ್ಷಫಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಬಿ.ಕೆ ವಸಂತ್

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!