22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!