23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya
error: Content is protected !!