September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya
error: Content is protected !!