September 6, 2026
ತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಪಟ್ಟಣ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಪಟ್ಟಣ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಫೆ.4ರಂದು ಬೆಳ್ತಂಗಡಿಯಲ್ಲಿ ಬೆಳಿಗ್ಗೆ ಬೈಕ್ ರ್ಯಾಲಿ ಜರುಗಿತು
ಫೆ. 6 ರಿಂದ ಫೆ .17ರವರೆಗೆ ಬೆಳ್ತಂಗಡಿ ತಾಲೂಕಿನ 48

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥ ಸಂಚರಿಸಲಿದ್ದು, ಇದರ ಪೂರ್ವಭಾವಿಯಾಗಿ ತಾಲೂಕು ಮಟ್ಟದಲ್ಲಿ ಈ ಕಾಯ೯ಕ್ರಮ ನಡೆಯಿತು.
ಇಂದು ಫೆ.4.ರಂದು ಪೂರ್ವಾಹ್ನ 9ಗಂಟೆಯಿಂದ ಬೆಳ್ತಂಗಡಿ ಮುಖ್ಯ ರಸ್ತೆಯ ಅಯ್ಯಪ್ಪ ಗುಡಿಯಿಂದ ಬೆಳ್ತಂಗಡಿ ತಾಲೂಕು ಕಛೇರಿಯವರೆಗೆ ಬೈಕ್ ಜಾಥಾವು ಯಶಸ್ವಿಯಾಗಿ ನಡೆಯಿತು .

ತಹಸೀಲ್ದಾರ್ ಪೃಥ್ವಿ ಸಾನಿಕಮ್ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ತಾ.ಪಂಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸಂವಿಧಾನ ಜಾಗೃತಿ ಜಾಥದ ಮಹತ್ವವನ್ನು ತಿಳಿಸಿ ಫೆ.6ನೇ ತಾರೀಕಿನಿಂದ ತಾಲೂಕಿನಾದ್ಯಂತ ಸಂಚರಿಸಲಿರುವ ಜಾಥಕ್ಕೆ ಎಲ್ಲರ ಸಹಕಾರ ಕೋರಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ರ್ಯಾಲಿಯ ನೇತೃತ್ವ ವಹಿಸಿದ್ದರು.

ವೃತ್ತ ನಿರೀಕ್ಷಕ ಸುಬ್ರಪುರ್ ಮಟ್,ತಾ.ಪಂ.ಅಧೀಕ್ಷಕ ಡಿ.ಪ್ರಶಾಂತ್, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ,ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಧನಂಜಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು,NRLM ತಾಲೂಕು ಸಂಯೋಜಕ ಜಯಾನಂದ ಮತ್ತಿತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

Related posts

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya
error: Content is protected !!