July 23, 2026
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!