September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!