23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24ವ) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಸಂಚಾರಿಸುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತಿದ್ದ ಧರಣೇಂದ್ರ ಪೂಜಾರಿಯವರ ತಂದೆ ವಿಕಲಚೇತನರಾಗಿದ್ದು ಕುಟುಂಬದ ಜೀವನ ನಿರ್ವಹಣೆ ಇವರ ದುಡಿಮೆಯಲ್ಲೇ ಸಾಗುತಿತ್ತು ಎನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya
error: Content is protected !!