September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24ವ) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಸಂಚಾರಿಸುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತಿದ್ದ ಧರಣೇಂದ್ರ ಪೂಜಾರಿಯವರ ತಂದೆ ವಿಕಲಚೇತನರಾಗಿದ್ದು ಕುಟುಂಬದ ಜೀವನ ನಿರ್ವಹಣೆ ಇವರ ದುಡಿಮೆಯಲ್ಲೇ ಸಾಗುತಿತ್ತು ಎನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya
error: Content is protected !!