25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!