25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya
error: Content is protected !!