September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!