June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಳಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.05 ರಂದು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶೋಭಾ ರವರ ಅಧ್ಯಕ್ಷೆಯಲ್ಲಿ ಬಳಂಜ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸುವುದರ ಮೂಲಕ ಕೃಷಿ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಗ್ರಾಮ ಸಭೆಯು ಉತ್ತಮವಾಗಿ ನಡೆದಿರುವುದರ ಬಗ್ಗೆ ಅಭಿನಂದಿಸಿದರು.

ಮನೆಯ ವ್ಯಾಪ್ತಿ, ಆವರಣವನ್ನು ಸ್ವಚ್ಛತೆಯಲ್ಲಿ ಇರಿಸಿಕೊಂಡ ಗ್ರಾಮಸ್ಥರಾದ ಶಾರದಾ, ಕರ್ತೆ, ವಾರಿಜ, ಸುಮಿತ್ರಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಹಾಗೂ ಶ್ರಮದಾನದ ಮೂಲಕ ರಸ್ತೆ ಬದಿಯ ಗಿಡಗಂಟಿಯನ್ನು ತೆಗೆಸಿದಂತಹ ಶಶಿಧರ ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.

ಊರಿನ ಅಭಿವೃದ್ಧಿಯ ದೃಷ್ಟಿಯಲ್ಲಿ ಹಲವು ಸಮಯಗಳ ಕಾಲ ಚರ್ಚೆಗಳು ನಡೆದವು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ,ರವೀಂದ್ರ ಬಿ. ಅಮೀನ್, ನಿಝಾಮ್, ಶ್ರೀಮತಿ ಬೇಬಿ,ಶ್ರೀಮತಿ ಪದ್ಮಾವತಿ, ಶ್ರೀಮತಿ ಪ್ರಸನ್ನ, ಶ್ರೀಮತಿ ಲೀಲಾವತಿ, ಶ್ರೀಮತಿ ಸುಚಿತ್ರಾ ಕೆ., ಶ್ರೀಮತಿ ಯಕ್ಷಿತಾ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು ಹಾಗೂ ಕಳೆದ ಗ್ರಾಮ ಸಭೆಯ ನಡವಳಿಗಳ ಬಗ್ಗೆ ಅನುಪಾಲನ ವರದಿ ವಾಚಿಸಿದರು.

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!