22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24ವ) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಸಂಚಾರಿಸುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತಿದ್ದ ಧರಣೇಂದ್ರ ಪೂಜಾರಿಯವರ ತಂದೆ ವಿಕಲಚೇತನರಾಗಿದ್ದು ಕುಟುಂಬದ ಜೀವನ ನಿರ್ವಹಣೆ ಇವರ ದುಡಿಮೆಯಲ್ಲೇ ಸಾಗುತಿತ್ತು ಎನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!