37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

ನೆರಿಯ: ಸಿಯೋನ್ ಆಶ್ರಮ ನಿರ್ಗತಿಕ, ಮಾನಸಿಕ ಅಸ್ವಸ್ಥರ ಮನೆ ತನ್ನ ಸ್ಥಾಪನೆಯ 25 ವರ್ಷಗಳನ್ನು ಮಾರ್ಚ್ 22 ರಂದು ಪೂರ್ಣಗೊಳಿಸಲಿದೆ. ಸಿಯೋನ್ ಆಶ್ರಮದ ಬೆಳ್ಳಿಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ 50ರ ಸುವರ್ಣ ಸಂಭ್ರಮ ಈ ಎರಡು ಸುಸಂಧರ್ಭಗಳನ್ನು ರಾಜ್ಯ ಮಟ್ಟದಲ್ಲಿ ಗುರುತಿಸಲ್ಪಡುವಂತೆ ವಿಭಿನ್ನವಾಗಿ ಆಚರಿಸಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಘನಸಾರಥ್ಯದಲ್ಲಿ ಸಮಾಲೋಚಿಸಿ ಮುಂದಡಿ ಇಟ್ಟಿದ್ದು, ಮಾರ್ಚ್ 22 ರಂದು ಜರುಗುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.


ಸಿಯೋನ್ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.5 ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಎಂ.ಪಿ.ಶ್ರೀನಾಥ್, ರಜತಮಹೋತ್ಸವ ಸ್ವಾಗತ ಸಮಿತಿಯ ಎಲ್ಲಾ ಸದಸ್ಯರುಗಳು, ಸಂಸ್ಥೆಯ ಆಡಳಿತ ಮಂಡಳಿಯವರು, ಹಿತೈಷಿಗಳು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya
error: Content is protected !!