July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಸಮೀಪದ ಕಡ್ತ್ಯಾರ್ ಎಂಬಲ್ಲಿ ಜ.28ರ ಆದಿತ್ಯವಾರದಂದು ಸಂಜೆ 5.30ರ ವೇಳೆಗೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕುಕ್ಕೇಡಿ ಸಾಲಿಡ್ ಫಯರ್ ವರ್ಕ್ಸ್‌ನ ಮಾಲಕ ಸಯ್ಯದ್ ಬಶೀ‌ರ್(47ವ) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳದಳಿಯ ಕಿರಣ್ (24ವ)ರವರನ್ನು ಫೆ.5ರಂದು ಬೆಳ್ತಂಗಡಿಯ ಹೆಚ್ಚುವರಿ ಮತ್ತು ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸ್ಫೋಟ ಸಂಭವಿಸಿ ಕೇರಳದ ತ್ರಿಶೂರ್‌ನ ವರ್ಗೀಸ್(69ವ), ಹಾಸನದ ಅನ್ನನಾಯ್ಕನಹಳ್ಳಿಯ ಚೇತನ್ ಎ.ಯು(24ವ) ಮತ್ತು ಪಾಲಕ್ಕಾಡ್‌ನ ಕೈರಾಡಿ ಕುರುಂಬೂರಿನ ಸ್ವಾಮಿ ಯಾನೆ ನಾರಾಯಣ ಕೆ(56ವ)ರವರು ಮೃತಪಟ್ಟು ಆರು ಮಂದಿ ಕಾರ್ಮಿಕರು ಗಾಯಗೊಂಡ ಘಟನೆಗೆ ಸಂಬಂಧಿಸಿ ಕಡ್ಯಾರ್ ಚರಡಿಕೆ ನಿವಾಸಿ ಶಾಂತಿ ಮ್ಯಾಥ್ಯ(33ವ)ರವರು ನೀಡಿದ ದೂರಿನಂತೆ ಸ್ಫೋಟಕ ತಯಾರಿ ಪರವಾನಿಗೆಯ ಷರತ್ತು ಉಲ್ಲಂಘನೆ, ಸ್ಫೋಟಕ ನಿರ್ವಹಣೆ ವೇಳೆ ನಿರ್ಲಕ್ಷ್ಯ, ವ್ಯಕ್ತಿಗಳ ಸಾವಿಗೆ ಕಾರಣವಾಗುವ ಕೃತ್ಯ ಎಸಗಿದ ಮತ್ತು ಆಸ್ತಿಗೆ ಹಾನಿ ಉಂಟು ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿ ಪೊಲೀಸ್‌ ಕಸ್ಟಡಿಯಲ್ಲಿದ್ದ ಸಯ್ಯದ್ ಬಶೀರ್ ಮತ್ತು ಕಿರಣ್‌ರವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಪ್ರಮುಖ ಆರೋಪಿ ಸಯ್ಯದ್ ಬಶೀರ್ ಪರ ಮಂಗಳೂರಿನ ಖ್ಯಾತ ವಕೀಲ ಅರುಣ್ ಬಂಗೇರ ಅವರು ಫೆ.೫ರಂದು ಕೋರ್ಟ್‌ಗೆ ಹಾಜರಾಗಿದ್ದರಾದರೂ ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ. ಎರಡನೇ ಆರೋಪಿ ಕಿರಣ್ ಪರ ಬೆಳ್ತಂಗಡಿಯ ನ್ಯಾಯವಾದಿ ಪ್ರಸಾದ್‌ರವರು ಜಾಮೀನು ಅರ್ಜಿ ಸಲ್ಲಿಸಿದರಾದರೂ ಆಕ್ಷೇಪ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ಅವರು ಕಾಲಾವಕಾಶ ಕೇಳಿದ್ದರಿಂದ ನ್ಯಾಯಾಧೀಶ ವಿಜಯೇಂದ್ರರವರು ಅರ್ಜಿಯ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದರು.

ಈ ಮಧ್ಯೆ ಘಟನೆಗೆ ಸಂಬಂಧಿಸಿ ಅನಿಲ್ ಡೇವಿಡ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!