23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!