32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಳಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.05 ರಂದು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶೋಭಾ ರವರ ಅಧ್ಯಕ್ಷೆಯಲ್ಲಿ ಬಳಂಜ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸುವುದರ ಮೂಲಕ ಕೃಷಿ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಗ್ರಾಮ ಸಭೆಯು ಉತ್ತಮವಾಗಿ ನಡೆದಿರುವುದರ ಬಗ್ಗೆ ಅಭಿನಂದಿಸಿದರು.

ಮನೆಯ ವ್ಯಾಪ್ತಿ, ಆವರಣವನ್ನು ಸ್ವಚ್ಛತೆಯಲ್ಲಿ ಇರಿಸಿಕೊಂಡ ಗ್ರಾಮಸ್ಥರಾದ ಶಾರದಾ, ಕರ್ತೆ, ವಾರಿಜ, ಸುಮಿತ್ರಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಹಾಗೂ ಶ್ರಮದಾನದ ಮೂಲಕ ರಸ್ತೆ ಬದಿಯ ಗಿಡಗಂಟಿಯನ್ನು ತೆಗೆಸಿದಂತಹ ಶಶಿಧರ ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.

ಊರಿನ ಅಭಿವೃದ್ಧಿಯ ದೃಷ್ಟಿಯಲ್ಲಿ ಹಲವು ಸಮಯಗಳ ಕಾಲ ಚರ್ಚೆಗಳು ನಡೆದವು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ,ರವೀಂದ್ರ ಬಿ. ಅಮೀನ್, ನಿಝಾಮ್, ಶ್ರೀಮತಿ ಬೇಬಿ,ಶ್ರೀಮತಿ ಪದ್ಮಾವತಿ, ಶ್ರೀಮತಿ ಪ್ರಸನ್ನ, ಶ್ರೀಮತಿ ಲೀಲಾವತಿ, ಶ್ರೀಮತಿ ಸುಚಿತ್ರಾ ಕೆ., ಶ್ರೀಮತಿ ಯಕ್ಷಿತಾ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು ಹಾಗೂ ಕಳೆದ ಗ್ರಾಮ ಸಭೆಯ ನಡವಳಿಗಳ ಬಗ್ಗೆ ಅನುಪಾಲನ ವರದಿ ವಾಚಿಸಿದರು.

Related posts

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya
error: Content is protected !!