25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24ವ) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಸಂಚಾರಿಸುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತಿದ್ದ ಧರಣೇಂದ್ರ ಪೂಜಾರಿಯವರ ತಂದೆ ವಿಕಲಚೇತನರಾಗಿದ್ದು ಕುಟುಂಬದ ಜೀವನ ನಿರ್ವಹಣೆ ಇವರ ದುಡಿಮೆಯಲ್ಲೇ ಸಾಗುತಿತ್ತು ಎನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya
error: Content is protected !!